ಜಿಲ್ಲೆತುಮಕೂರುತುಮಕೂರು ನಗರ

ವಾರ್ಡ್ ನಂ.21ರ ವ್ಯಾಪ್ತಿಯ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಜಿ.ಬಿ.ಜ್ಯೋತಿಗಣೇಶ್ ಚಾಲನೆ

ತುಮಕೂರು : ಮಹಾನಗರಪಾಲಿಕೆಯ ವಾರ್ಡ್ ನಂ.21ರ ವ್ಯಾಪ್ತಿಯಲ್ಲಿ ಮಹಾತ್ಮಗಾಂಧಿ ನಗರ ವಿಕಾಸ ಯೋಜನೆಯಡಿಯಲ್ಲಿ ವಿವಿಧ ರಸ್ತೆಗಳ ಹಾಗೂ ಚರಂಡಿ ಅಭಿವೃದ್ಧಿ ಕಾಮಗಾರಿಗೆ ತುಮಕೂರು ನಗರ ಶಾಸಕರಾದ ಜಿ.ಬಿ.ಜ್ಯೋತಿಗಣೇಶ್ ರವರು ಭೂಮಿ ಪೂಜೆ ನೆರವೇರಿಸಿದರು.
ಈ ಸಂಧರ್ಭದಲ್ಲಿ ಮಾತನಾಡಿದ ಮಾನ್ಯ ಶಾಸಕರು ರಾಜ್ಯ ಸರ್ಕಾರದ ನಗರಾಭಿವೃದ್ಧಿಯ ಯೋಜನೆಯಲ್ಲಿ ಪ್ರತಿ ಮಹಾನಗರಪಾಲಿಕೆಗೂ ರೂ.125.00 ಕೋಟಿ ಅನುದಾನ ನೀಡಿದ್ದು, ಈ ಅನುದಾನದಲ್ಲಿ ತುಮಕೂರಿನ ಎಲ್ಲಾ ವಾರ್ಡಿನಲ್ಲೂ ಕಾಮಗಾರಿಗಳಿಗೆ ಚಾಲನೆ ನೀಡಲಾಗುತ್ತಿದೆ. ರೂ.125.00 ಕೋಟಿಗಳಲ್ಲಿ ಸರ್ಕಾರದ ವಿವಿಧ ಯೋಜನೆಗಳಿಗೆ ಮಹಾನಗರಪಾಲಿಕೆ ಮತ್ತು ರಾಜ್ಯ ಸರ್ಕಾರದ ವಂತಿಕೆಗಳನ್ನು ಕಳೆದು ಕಾಮಗಾರಿಗೆ ಸುಮಾರು 44.00 ಕೋಟಿ ರೂಗಳು ಲಭ್ಯವಿದೆ.
ಈ ಭಾಗದಲ್ಲಿ ಸದರಿ ಕಾಮಗಾರಿಗಳು ರೂ.210.00 ಲಕ್ಷಗಳ ವೆಚ್ಚದಲ್ಲಿ ನಡೆಯಲಿದ್ದು, ಸುಮಾರು 6405 ಮೀಟರ್‌ನಷ್ಟು ಹಾಸ್ಪಾಲ್ಟ್, ಸುಮಾರು 2 ಕಿ.ಮೀ ನಷ್ಟು ಚರಂಡಿ ಮತ್ತು ಸುಮಾರು 80 ಮೀಟರ್ ನಷ್ಟು ಸಿಸಿ ರಸ್ತೆ ಹಾಗೂ ಕಲ್ವರ್ಟ್ಗಳನ್ನು ನಿರ್ಮಿಸಲಾಗುತ್ತಿದೆ. ಸಾರ್ವಜನಿಕರ ಅನುಕೂಲಕ್ಕೆ ತಕ್ಕಂತೆ ಸಿಸಿ ಚರಂಡಿ ಹಾಗೂ ರಸ್ತೆ ಮಾಡಲಾಗುವುದು ಈ ಸಂದರ್ಭದಲ್ಲಿ ಸಾರ್ವಜನಿಕರು ಕಾಮಗಾರಿ ನಡೆಯುವ ಸಮಯದಲ್ಲಿ ಸಹಕರಿಸಬೇಕೆಂದು ತಿಳಿಸಿದರು.
ಈ ಸಂಧರ್ಭದಲ್ಲಿ ಮಹಾನಗರಪಾಲಿಕೆಯ ಮಹಾಪೌರರಾದ ಬಿ.ಜಿ.ಕೃಷ್ಣಪ್ಪ, ಪಾಲಿಕೆ ಸದಸ್ಯರಾದ ಲಲಿತ ರವೀಶ್, ಪಾಲಿಕೆ ಆಯುಕ್ತರಾದ ರೇಣುಕಾ, ಮುಖಂಡರಾದ ಆಂಜಿನಪ್ಪ, ಸರೋಜಗೌಡ, ವೈ.ಜಿ ರಾಜೇಂದ್ರ, ಯೋಗೀಶ್, ಲಾಯರ್ ಸುರೇಶ್, ಪಾಲಿಕೆ ಸಿಬ್ಬಂದಿ ಹಾಗೂ ಮುಂತಾದ ಮುಂಖಡರು ಹಾಜರಿದ್ದರು.

Related Articles

Back to top button
Disclaimer: WebOnline.in is not responsible for any news or content. We are only developers for this client And any type of content posted here belong's to site's owner/editor, not WebOnline.in Company

Adblock Detected

Please consider supporting us by disabling your ad blocker