ತುಮಕೂರುತುಮಕೂರು ನಗರರಾಜಕೀಯರಾಜ್ಯ

ಪಂಚರತ್ನ ಯೋಜನೆ ಅನುಷ್ಠಾನಕ್ಕಾಗಿ ಜೆಡಿಎಸ್ ಪಕ್ಷಕ್ಕೆ ಸರಕಾರ ರಚಿಸುವಂತಹ ಶಕ್ತಿ ನೀಡಿ : ನಿಖಿಲ್ ಕುಮಾರಸ್ವಾಮಿ

ತುಮಕೂರು : ಜೆಡಿಎಸ್ ಪಕ್ಷ ಬಡವರು, ದೀನ ದಲಿತರು, ಅಲ್ಪಸಂಖ್ಯಾತರ ಕಷ್ಟ ಕಾರ್ಪಣ್ಯಗಳನ್ನು ಅರಿತು,ಅವುಗಳ ನಿವಾರಣೆಗಾಗಿ ಪಂಚರತ್ನ ಯೋಜನೆಯನ್ನು ರೂಪಿಸಿದೆ.ಇವುಗಳು ಅನುಷ್ಠಾನಕ್ಕೆ ಬರಬೇಕೆಂದರೆ ತಾವೆಲ್ಲರೂ ಜೆಡಿಎಸ್ ಪಕ್ಷಕ್ಕೆ ಯಾರ ಹಂಗಿಲ್ಲದೆ ಸರಕಾರ ರಚಿಸುವಂತಹ ಶಕ್ತಿಯನ್ನು ನೀಡಬೇಕೆಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದ್ದಾರೆ.
ನಗರದ ಜೆಡಿಎಸ್ ಜಿಲ್ಲಾ ಕಾರ್ಯಾಲಯದ ಆವರಣದಲ್ಲಿ ಪಕ್ಷದವತಿಯಿಂದ ಏರ್ಪಡಿಸಿದ್ದ ನಗರ ವಿಧಾನಸಭಾಕ್ಷೇತ್ರದ ಜೆಡಿಎಸ್ ಜನಸಮ್ಮಿಲನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡುತಿದ್ದ ಅವರು,ಪಕ್ಷ ಅಧಿಕಾರಕ್ಕೆ ಬಂದರೆ ಪಂಚರತ್ನ ಯೋಜನೆ ಅನುಷ್ಠಾನಗೊಳಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದರು.
ಪAಚರತ್ನ ಯೋಜನೆಗಳ ಘೋಷಿಸಿರುವ ಕಾರ್ಯಕ್ರಮಗಳನ್ನು ಜಾರಿಗೆ ಪ್ರತಿ ಯೋಜನೆಗೆ 25 ಸಾವಿರ ಕೋಟಿಯಂತೆ ಒಟ್ಟು 1.25 ಲಕ್ಷ ಕೋಟಿ ರೂ.,ಅನುದಾನ ಬೇಕಿದ್ದು,ಅತಿ ಹೆಚ್ಚು ತೆರಿಗೆ ಕಟ್ಟುವ ಕರ್ನಾಟಕದಲ್ಲಿ ಇಷ್ಟು ಅನುದಾನ ಕ್ರೂಢೀಕರಿಸುವುದು ಕಷ್ಟವಲ್ಲ.ಈಗಾಗಲೇ ಎರಡು ಬಾರಿ ಮುಖ್ಯಮಂತ್ರಿಯಾಗಿ ಹೆಚ್.ಡಿ.ಕುಮಾರಸ್ವಾಮೀ ಸಂಪನ್ಮೂಲ ಕ್ರೂಢೀಕರಣದ ದಾರಿಗಳನ್ನು ಕಂಡುಕೊಂಡಿದ್ದಾರೆ. ಅದನ್ನು ರಾಜ್ಯದ ಜನತೆಗೆ ಅರ್ಪಿಸಲಿದ್ದಾರೆ ಎಂದು ನಿಖಿಲ್ ಕುಮಾರಸ್ವಾಮಿ ನುಡಿದರು.

ಬಿಜೆಪಿ,ಕಾಂಗ್ರೆಸ್ ಪಕ್ಷಗಳ ಸೋಗಲಾಡಿತನದ ರಾಜಕಾರಣದಿಂದ ರಾಜ್ಯದ ಜನತೆ ಬೇಸತ್ತಿದ್ದಾರೆ. ಹಾಗಾಗಿ ಬದಲಾವಣೆ ಬಯಸಿದ್ದು,ಯಾರ ಹಂಗಿಲ್ಲದೆ ಜೆಡಿಎಸ್ ಸ್ವತಂತ್ರವಾಗಿ ಅಧಿಕಾರಕ್ಕೆ ತರಬೇಕೆಂಬುದು ಹೆಚ್.ಡಿ.ಕೆಯವರ ಹೋರಾಟವಾಗಿದೆ.ಅವರೊಂದಿಗೆ ಪಕ್ಷದ ಇತರೆ ಮುಖಂಡರು ಕೈಜೋಡಿಸಿದ್ದಾರೆ. ಕಾರ್ಯಕರ್ತರು ಸಹ ಚುನಾವಣೆಗೆ ಇನ್ನೂ 70-80 ದಿನಗಳಿದ್ದು ಹಗಲಿರುಳು ಶ್ರಮಿಸಿ ಪಕ್ಷದ ಗೆಲುವಿಗೆ ಸಂಕಲ್ಪ ತೊಡಬೇಕು. ಪಕ್ಷಕ್ಕಾಗಿ ದುಡಿದವರನ್ನು ಗುರುತಿಸಿ ಅಧಿಕಾರ ಕೊಡಲಿದೆ ಎಂದರು.
ತುಮಕೂರು ನಗರ ವಿಧಾನಸಭಾ ಕ್ಷೇತ್ರದಲ್ಲಿ 2013 ಮತ್ತು 2018ರಲ್ಲಿ ವಿಧಾನಸಭಾ ಚುನಾವಣೆಯಲ್ಲಿ ನಗರ ಕ್ಷೇತ್ರದಿಂದ ಸ್ಪರ್ಧಿಸಿ ಕಡಿಮೆ ಅಂತರದಲ್ಲಿ ಸೋತಿದ್ದು ಎನ್. ಗೋವಿಂದರಾಜು ಕ್ಷೇತ್ರದ ಜನತೆಯಿಂದ ದೂರವಾಗದೆ ನಿರಂತರವಾಗಿ ಹೋರಾಟ ಮಾಡಿಕೊಂಡು ಬಂದಿದ್ದಾರೆ. ಈ ಬಾರಿ ಅವರನ್ನು ಆಶೀರ್ವದಿಸಿ, ಕುಮಾರಣ್ಣನ ಕೈಬಲಪಡಿಸಿ ಎಂದು ನಿಖಿಲ್ ಕುಮಾರಸ್ವಾಮಿ ಮನವಿ ಮಾಡಿದರು.
ನಗರ ಜೆಡಿಎಸ್ ಅಭ್ಯರ್ಥಿ ಎನ್.ಗೋವಿಂದರಾಜು ಮಾತನಾಡಿ,ರಾಜ್ಯದಲ್ಲಿ ಜೆಡಿಎಸ್ ಪಕ್ಷವು ಅಧಿಕಾರಕ್ಕೆ ಬಂದರೆ ತುಮಕೂರು ನಗರದಲ್ಲಿ 5 ಹೈಟೆಕ್ ಆಸ್ಪತ್ರೆ,7 ಅಂತರಾಷ್ಟ್ರೀಯ ಗುಣಮಟ್ಟದ ಶಿಕ್ಷಣ ಸಿಗುವ ಶಾಲೆಗಳನ್ನು ನಿರ್ಮಿಸುವ ಮೂಲಕ ಗುಣಮಟ್ಟದ ಆರೋಗ್ಯ ಮತ್ತು ಶಿಕ್ಷಣ ಉಚಿತವಾಗಿ ದೊರೆಯುವಂತೆ ಮಾಡಲಿದ್ದಾರೆ. ಕುಮಾರಣ್ಣ ನುಡಿದಂತೆ ನಡೆಯುವ ವ್ಯಕ್ತಿ ಎಂದು ಹೇಳಿದರು.
ಜೆಡಿಎಸ್ ಜಿಲ್ಲಾಧ್ಯಕ್ಷ ಆರ್.ಸಿ.ಆಂಜನಪ್ಪ ಅಧ್ಯಕ್ಷತೆವಹಿಸಿದ್ದರು. ಜೆಡಿಎಸ್ ಕಾರ್ಯಾಧ್ಯಕ್ಷ ಟಿ.ಆರ್.ನಾಗರಾಜು, ರಾಜ್ಯ ವಕ್ತಾರ ಹಾಲನೂರು ಲೇಪಾಕ್ಷಿ,ಮಹಾನಗರ ಪಾಲಿಕೆ ಉಪ ಮೇಯರ್ ಟಿ.ಕೆ.ನರಸಿಂಹಮೂರ್ತಿ, ಸದಸ್ಯರಾದ ಎಚ್‌ಡಿಕೆ ಮಂಜುನಾಥ್,ಲಕ್ಷ್ಮೀ ನರಸಿಂಹರಾಜು, ಎ.ಶ್ರೀನಿವಾಸ್, ಧರಣೇಂದ್ರ ಕುಮಾರ್, ಲಲಿತಾರವೀಶ್,ಮುಖಂಡರಾದ ಸೋಲಾರ್ ಕೃಷ್ಣಮೂರ್ತಿ,ಹಾಲೆನೂರು ಆನಂತ್,ಹಿರೇಹಳ್ಳಿ ಮಹೇಶ್,ಮಹಿಳಾ ಘಟಕದ ಅಧ್ಯಕ್ಷೆ ಕುಸುಮಾ ಜಗನ್ನಾಥ್,ತಾಹೇರಾ ಕುಲ್ಸ್ಮ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Related Articles

Back to top button
Disclaimer: WebOnline.in is not responsible for any news or content. We are only developers for this client And any type of content posted here belong's to site's owner/editor, not WebOnline.in Company

Adblock Detected

Please consider supporting us by disabling your ad blocker