ಆರೋಗ್ಯರಾಜ್ಯಸುದ್ದಿ

ಶಸ್ತ್ರಚಿಕಿತ್ಸಕರ ದಿನಾಚರಣೆ ಪ್ರಯುಕ್ತ ನಡಿಗೆ ಜಾಥ ಕಾರ್ಯಕ್ರಮ

ಹೊಸ ತಂತ್ರಜ್ಞಾನಗಳ ಅಳವಡಿಕೆಯ ಶಸ್ತ್ರಚಿಕಿತ್ಸೆಗಳಿಂದ ವಿಶ್ವ ಭೂಪಟದಲ್ಲಿ ಬೆಂಗಳೂರಿಗೆ ವಿಶೇಷ ಸ್ಥಾನ

ಬೆಂಗಳೂರು : ಹೊಸ ತಂತ್ರಜ್ಞಾನಗಳ ಅಳವಡಿಕೆಯ ಶಸ್ತ್ರಚಿಕಿತ್ಸೆಗಳಿಂದ ಬೆಂಗಳೂರು ವಿಶ್ವದ ಮೆಡಿಕಲ್‌ ಟೂರಿಸಂ ನಲ್ಲಿ ತನ್ನದೇ ಆದ ವಿಶೇಷ ಸ್ಥಾನವನ್ನು ಪಡೆದುಕೊಂಡಿದೆ. ಇದನ್ನ ಇನ್ನಷ್ಟು ಉತ್ತಮಗೊಳಿಸುವ ನಿಟ್ಟಿನಲ್ಲಿ ಸರ್ಜಿಕಲ್‌ ಸೊಸೈಟಿ ಕಾರ್ಯಕ್ರಮಗಳು ಮತ್ತು ತರಬೇತಿಗಳನ್ನು ಹಮ್ಮಿಕೊಳ್ಳಲಿದೆ ಎಂದು ಬೆಂಗಳೂರು ಸರ್ಜಿಕಲ್‌ ಸೊಸೈಟಿ ಅಧ್ಯಕ್ಷರಾದ ಡಾ. ವೆಂಕಟೇಶ್‌ ತಿಳಿಸಿದ್ದಾರೆ.

ಸರ್ಜಿಕಲ್ ಸೊಸೈಟಿ ಆಫ್ ಬೆಂಗಳೂರು ASICC(R) ಗೋಲ್ಡನ್ ಜುಬ್ಲಿ ಆಚರಣೆ ಮತ್ತು ಕರ್ನಾಟಕ ಸ್ಟೇಟ್ ಚಾಪ್ಟರ್ ಆಫ್ ಅಸೋಸಿಯೇಷನ್ ಆಫ್ ಸರ್ಜನ್ಸ್ ಇಂಡಿಯಾ ವತಿಯಿಂದ ಆಯೋಜಿಸಲಾಗಿದ್ದ Surgeon’s Day (ಶಸ್ತ್ರಚಿಕಿತ್ಸರ ದಿನ) ಪ್ರಯುಕ್ತ ವಾಕ್ ಥಾನ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಶುಶ್ರತರವರು ವಿಶ್ವದ ಮೊದಲ ಆಪರೇಷನ್ ಮಾಡಿದ ಸರ್ಜಿಕಲ್ ವೈದ್ಯ. ಅದರಿಂದ ಸರ್ಜಿಕಲ್ ದಿನವನ್ನು ಅಚರಿಸಲಾಗುತ್ತಿದೆ. ಕ್ಯಾನ್ಸರ್ ಮತ್ತು ಹೃದಯ ಸಂಭಂದಿದ ಮತ್ತು ಹಲವಾರು ರೋಗಗಳ ನಿವಾರಣೆಗಾಗಿ ಶಸ್ತ್ರಚಿಕಿತ್ಯೆ ಮುಖ್ಯ. ಇಂದು ಮೆಡಿಕಲ್ ಟೂರಿಸಂನಲ್ಲಿ ಬೆಂಗಳೂರುನಗರ ವಿಶ್ವಮಟ್ಚದಲ್ಲಿ ಹೆಸರು ಪಡೆದಿದೆ. ಶಸ್ತ್ರಚಿಕಿತ್ಸೆಯಲ್ಲಿ ನಮ್ಮ ನಗರದ ವೈದ್ಯರುಗಳು ಹೊಸ ತಂತ್ರಜ್ಞಾನ ಅಳವಡಿಸಿಕೊಳ್ಳುವಲ್ಲಿ ಮುಂಚೂಣಿಯಲ್ಲಿದ್ದಾರೆ. ಹೆಚ್ಚಿನ ವೈದ್ಯಕೀಯ ಕಾಲೇಜುಗಳು ಇರುವುದರಿಂದ ಉತ್ತಮ ಸೇವೆ ಹಾಗೂ ತರಬೇತಿಯನ್ನು ನೀಡಲು ಸಾಧ್ಯವಾಗುತ್ತಿದೆ. ಶಸ್ತ್ರಚಿಕಿತ್ಸೆ ಕುರಿತು ಯುವ ವೈದ್ಯರುಗಳನ್ನು ಸಮರ್ಪಕವಾಗಿ ತಯಾರಿ ಮಾಡಿ ಸಮಾಜಕ್ಕೆ ನೀಡುವ ನಿಟ್ಟಿನಲ್ಲಿ ಇನ್ನಷ್ಟು ತರಬೇತಿ ಹಾಗೂ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ, ವಿಶ್ವದ ಮೆಡಿಕಲ್‌ ಟೂರಿಸಂ ನಲ್ಲಿ ನಮ್ಮ ಸ್ಥಾನವನ್ನ ಇನ್ನಷ್ಟು ಉತ್ತಮಗೊಳಿಸಲಾಗುವುದು ಎಂದು ಹೇಳಿದರು.

ಬೆಂಗಳೂರು ಸರ್ಜಿಕಲ್‌ ಸೊಸೈಟಿ ಕಾರ್ಯದರ್ಶಿಗಳಾದ ಡಾ.ಮನೀಶ್ ಜೋಷಿರವರು ಮಾತನಾಡಿ ಶಸ್ತ್ರಚಿಕಿತ್ಸಕರು ಎಂದರೆ ಅವರು ಎಲ್ಲರಂತೆ ಮನುಷ್ಯರು, ಆಪರೇಷನ್ ಕೊಠಡಿಗೆ ಬಂದಾಗ ತನ್ನ ಎಲ್ಲ ಸಂಕಷ್ಟಗಳನ್ನು ಮರೆತು ಅಪರೇಷನ್ ಗೆ ಒಳಗಾಗುವ ವ್ಯಕ್ತಿಗಳ ಪ್ರಾಣ ಮತ್ತು ಅವರ ಕುಟುಂಬದ ಸಂಕಷ್ಟಗಳನ್ನು ದೂರ ಮಾಡಬೇಕು ಎಂದು ಆಪರೇಷನ್ ಮಾಡಲಾಗುತ್ತದೆ. ರೋಗಿಯು ಗುಣವಾಗಿ ಇಡಿ ಕುಟುಂಬವೆ ನಗುಮೂಗದಿಂದ ನಮ್ಮನ್ನು ನೋಡಿದಾಗ ನಾವು ಕಲಿತ ವಿದ್ಯೆಗೆ ನ್ಯಾಯ ಒದಗಿಸಿದಂತೆ ಮತ್ತು ಪ್ರಶಸ್ತಿ ಪಡೆದ ಸಂತೋಷ ನಮಗೆ ಆಗುತ್ತದೆ. ವೈದ್ಯರುಗಳು ಕೂಡಾ ಒತ್ತಡದಲ್ಲಿ ಕಾರ್ಯನಿರ್ವಹಿಸುತ್ತಾರೆ. ಆದ್ದರಿಂದ ಪ್ರತಿಯೊಬ್ಬರು ಪ್ರತಿದಿನ ಒಂದು ಘಂಟೆ ವಾಕಿಂಗ್ ಮಾಡಿ ಆರೋಗ್ಯ ರಕ್ಷಣೆ ಮಾಡಿಕೊಳ್ಳಬೇಕು ಎಂದು ಹೇಳಿದರು.

ಕ್ಯಾನ್ಸರ್ ಮತ್ತು ರೋಬಿಟಿಕ್ ಸರ್ಜನ್ ಮತ್ತು ಸರ್ಜಿಕಲ್ ಸೊಸೈಟಿ ಇಂಡಿಯಾದ ಅಧ್ಯಕ್ಷರಾದ ಡಾ.ರಾಜಶೇಖರ್ ಸಿ.ಜಾಕರವರು ಮಾತನಾಡಿ, ಸರ್ಜಿಕಲ್ ಸೊಸೈಟಿ 50ನೇವರ್ಷ ಸಂಭ್ರಮಾಚರಣೆ ಅಚರಿಸುತ್ತಿದೆ. ವೈದ್ಯರ ಜೊತೆಯಲ್ಲಿ ಸರ್ಜಿಯ ಆಗುವ ರೋಗಿಯ ಆರೋಗ್ಯ ಮುಖ್ಯ. ನಡಿಗೆ ಮೂಲಕ ಆರೋಗ್ಯ ಸಂರಕ್ಷಣೆ ಮಾಡಿಕೊಳ್ಳಬಹುದು. ಪ್ರತಿದಿನ ಮೂರು ಕಿಲೋ ಮೀಟರ್ ವಾಕಿಂಗ್ ನಿಂದ ಕ್ಯಾನ್ಸರ್ ಮತ್ತು ಹೃದಯ ಸಂಭಂದಿಸಿ ಖಾಯಿಲೆಯಿಂದ ದೂರವಿರಬಹುದು. ಪ್ರತಿದಿನ ಆಪರೇಷನ್ ಮಾಡಿ ಸರ್ಜಿಕಲ್ ಡಾಕ್ಟರ್ ಮಾನಸಿಕವಾಗಿ ಕುಗ್ಗಿಹೋಗುತ್ತಾರೆ , ನಡಿಗೆ ಮಾಡುವ ಮೂಲಕ ತಮ್ಮ ಆರೋಗ್ಯದ ಜೊತೆಯಲ್ಲಿ ಮಾನಸಿಕ ಸ್ಥಿತಿ ಸಮಸ್ಥಿತಿಯಲ್ಲಿ ಇಟ್ಟುಕೊಳ್ಳಬಹುದು. ನಮ್ಮ ಸರ್ಜಿಕಲ್ ಸೊಸೈಟಿ ಸಂಸ್ಥೆಯಲ್ಲಿ 1500ಕ್ಕೂ ಹೆಚ್ಚು ಖ್ಯಾತ ಸರ್ಜಿಕಲ್ ಡಾಕ್ಟರ್ ಗಳು ಇದ್ದಾರೆ ಎಂದು ಹೇಳಿದರು.

500 ಹೆಚ್ಚು ವೈದ್ಯರು, ದಾದಿಯರು ಮತ್ತು ಸಿಬ್ಬಂದಿಗಳು ನಡಿಗೆ ಜಾಥ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಸೆಂಟ್ ಮಾರ್ಥಾಸ್ ಆಸ್ಪತ್ರೆಯ ಆಡಳಿತ ಮಂಡಳಿ, ವೈದ್ಯರು ದಾದಿಯರು ಸೇಂಟ್ ಮಾರ್ಥಾಸ್ ಆಸ್ಪತ್ರೆಯಿಂದ ಫ್ರೀಡಂ ಪಾರ್ಕವರಗೆ 5ಕಿಲೋ ಮೀಟರ್ ವರಗೆ ವಾಕ್ ಥಾನ್ (ನಡಿಗೆ ಜಾಥ) ನಡೆಸಿದರು.

Show quoted text

Related Articles

Back to top button
Disclaimer: WebOnline.in is not responsible for any news or content. We are only developers for this client And any type of content posted here belong's to site's owner/editor, not WebOnline.in Company

Adblock Detected

Please consider supporting us by disabling your ad blocker