ಜಿಲ್ಲೆತುಮಕೂರುತುಮಕೂರು ಗ್ರಾಮಾಂತರರಾಜಕೀಯಸುದ್ದಿ

ಗ್ರಾಮಾಂತರ ವಿಧಾನಸಭಾ ಕ್ಷೇತ್ರದ 7 ಗ್ರಾ.ಪಂ.ಗಳಿಗೆ ಬಿಜೆಪಿ ಬೆಂಬಲಿತ ಅಧ್ಯಕ್ಷ – ಉಪಾಧ್ಯಕ್ಷರ ಆಯ್ಕೆ

ತುಮಕೂರು : ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದ 7 ಗ್ರಾ.ಪಂ.ಗಳಿಗೆ ನಡೆದ 2 ಹಂತದ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆಯಲ್ಲಿ ಐದರಲ್ಲಿ ಅವಿರೋಧ ಆಯ್ಕೆ ನಡೆದಿದ್ದು,2 ಪಂಚಾಯಿತಿಗಳಲ್ಲಿ ಚುನಾವಣೆ ನಡೆದಿದ್ದು,7 ಗ್ರಾಮಪಂಚಾಯಿತಿಗಳಲ್ಲಿಯೂ ಬಿಜೆಪಿ ಬೆಂಬಲಿತ ಸದಸ್ಯರುಗಳು, ಅಧ್ಯಕ್ಷರು,ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ನಿಡುವಳಲು: ನಿಡವಳಲು ಗ್ರಾಮಪಂಚಾಯಿತಿಯ ಅಧ್ಯಕ್ಷ ಸ್ಥಾನ ಪರಿಶಿಷ್ಟ ಜಾತಿಗೂ,ಉಪಾಧ್ಯಕ್ಷ ಸ್ಥಾನ ಬಿಸಿಎಂ ಎ  ಮಹಿಳೆಗೆ ಮೀಸಲಾಗಿತ್ತು.ಅಧ್ಯಕ್ಷ ಸ್ಥಾನಕ್ಕೆ ಹನುಮಂತರಾಯಪ್ಪ, ಉಪಾಧ್ಯಕ್ಷ ಸ್ಥಾನಕ್ಕೆ ಚಂದ್ರಕಲಾ ನಾಮಪತ್ರ ಸಲ್ಲಿಸಿದ್ದರು. ಬೇರೆ ಯಾರು ನಾಮಪತ್ರ ಸಲ್ಲಿಸಿದ ಹಿನ್ನೆಲೆಯಲ್ಲಿ ಎರಡು ಸ್ಥಾನಗಳಿಗೆ ಅವಿರೋಧವಾಗಿ ಆಯ್ಕೆಯಾಗಿರುವುದಾಗಿ ಚುನಾವಣಾದಿಕಾರಿಗಳು ಘೋಷಿಸಿದ್ದಾರೆ.
ನಾಗವಲ್ಲಿ: ನಾಗವಲ್ಲಿ ಗ್ರಾಮಪಂಚಾಯಿತಿಯ ಅಧ್ಯಕ್ಷ ಸ್ಥಾನ ಸಾಮಾನ್ಯ ಗೆ ಮೀಸಲಾಗಿದ್ದರೆ,ಉಪಾಧ್ಯಕ್ಷಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲಾಗಿತ್ತು. ಅಧ್ಯಕ್ಷಸ್ಥಾನಕ್ಕೆ ಮಂಗಳ ಗೌರಮ್ಮ,ಉಪಾಧ್ಯಕ್ಷ ಸ್ಥಾನಕ್ಕೆ ಜೋತಿ ಎನ್.ನಾಮಪತ್ರ ಸಲ್ಲಿಸಿದ್ದರು.
ಎರಡು ಸ್ಥಾನಗಳಿಗೆ ತಲಾ ಒಂದು ನಾಮಪತ್ರ ಬಂದ ಹಿನ್ನೆಲೆಯಲ್ಲಿ ಅಧ್ಯಕ್ಷರಾಗಿ ಮಂಗಳಗೌರಮ್ಮ, ಉಪಾಧ್ಯಕ್ಷರಾಗಿ ಜೋತಿ.ಎನ್. ಅವರುಗಳು ಅವಿರೋಧವಾಗಿ ಆಯ್ಕೆಯಾಗಿರುವುದಾಗಿ ಚುನಾವಣಾಧಿಕಾರಿಗಳು ಘೋಷಿಸಿದ್ದಾರೆ.
ಹೊನ್ನುಡಿಕೆ: ಹೊನ್ನುಡಿಕೆ ಗ್ರಾಮಪಂಚಾಯಿತಿ ಅಧ್ಯಕ್ಷ ಸ್ಥಾನ ಜನರಲ್ ಮಹಿಳೆಗೆ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ ಮೀಸಲಾಗಿತ್ತು. ಅಧ್ಯಕ್ಷ ಸ್ಥಾನಕ್ಕೆ ವಿಜಯಲಕ್ಷ್ಮಿ ಕಿಟ್ಟಪ್ಪ, ಉಪಾಧ್ಯಕ್ಷ ಸ್ಥಾನಕ್ಕೆ ರಾಮಕೃಷ್ಣಯ್ಯ (ಅಪ್ಪಿ) ಅವರುಗಳು ಸ್ಪರ್ಧಿಸಿದ್ದರು.
ಎರಡು ಹುದ್ದೆಗಳಿಗೆ ತಲಾ ಒಂದು ನಾಮಪತ್ರ ಸಲ್ಲಿಕೆಯಾದ ಕಾರಣ, ಅಧ್ಯಕ್ಷರಾಗಿ ವಿಜಯಲಕ್ಷ್ಮಿ ಕಿಟ್ಟಪ್ಪ, ಉಪಾಧ್ಯಕ್ಷರಾಗಿ ರಾಮಕೃಷ್ಣ (ಅಪ್ಪಿ) ಅವರುಗಳು ಅಧ್ಯಕ್ಷ-ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿರುವುದಾಗಿ ಚುನಾವಣಾ ಅಧಿಕಾರಿ ಘೋಷಣೆ ಮಾಡಿದರು.
ಹೆಬ್ಬೂರು: ಹೆಬ್ಬೂರು ಗ್ರಾ.ಪಂ.ನ ಅಧ್ಯಕ್ಷ ಸ್ಥಾನ ಜನರಲ್ ಮಹಿಳೆಗೆ, ಉಪಾಧ್ಯಕ್ಷ ಸ್ಥಾನ ಕ್ಯಾಟಗೆರಿ(ಎ)ಗೆ ಮೀಸಲಾಗಿತ್ತು. ಅಧ್ಯಕ್ಷ ಸ್ಥಾನಕ್ಕೆ ಲಕ್ಷ್ಮೀ ದೇವಮ್ಮ, ಉಪಾಧ್ಯಕ್ಷ ಸ್ಥಾನಕ್ಕೆ ಬಾಬು ಹೆಚ್.ಎನ್ ಸ್ಪರ್ಧಿಸಿದ್ದು, ಎರಡು ನಾಮಪತ್ರಗಳ ಹೊರತು ಬೇರೆಯವರು ನಾಮಪತ್ರ ಸಲ್ಲಿಸದ ಹಿನ್ನೇಲೆಯಲ್ಲಿ ಅಧ್ಯಕ್ಷರಾಗಿ ಲಕ್ಷ್ಮೀದೇವಮ್ಮ, ಉಪಾಧ್ಯಕ್ಷರಾಗಿ ಬಾಬು ಹೆಚ್.ಎನ್ ಅವರುಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಬೆಳ್ಳಾವಿ: ಬೆಳ್ಳಾವಿ ಗ್ರಾಮಪಂಚಾಯಿತಿಯ ಅಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ ಮೀಸಲಾಗಿದ್ದು, ಉಪಾಧ್ಯಕ್ಷ ಸ್ಥಾನ ಪರಿಶಿಷ್ಟ ಜಾತಿ ಮಹಿಳೆಗೆ ಮೀಸಲಾಗಿತ್ತು.ಅಧ್ಯಕ್ಷ ಸ್ಥಾನಕ್ಕೆ ಮಲ್ಲಿಕಾರ್ಜುನ ಆರ್.ಎಸ್., ಉಪಾಧ್ಯಕ್ಷರಾಗಿ ಲೋಕಮ್ಮ ಅವರುಗಳು ಸ್ಪರ್ಧಿ ಮಾಡಿದ್ದು, ಇವರ ವಿರುದ್ದ ಉಮೇದುವಾರಿಕೆ ಬಾರದ ಹಿನ್ನೆಲೆಯಲ್ಲಿ ಅಧ್ಯಕ್ಷ-ಉಪಾಧ್ಯಕ್ಷರನ್ನು ಅವಿರೋಧವಾಗಿ ಆಯ್ಕೆಯಾಗಿರುವುದಾಗಿ ಘೋಷಿಸಲಾಗಿದೆ.
ಮೈದಾಳ: ಮೈದಾಳ ಗ್ರಾಮಪಂಚಾಯಿತಿ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆದಿದ್ದು,ಅಧ್ಯಕ್ಷರಾಗಿ ಮಾದಗೊಂಡನ ಹಳ್ಳಿಯ ಬಿ.ಜಿ ಉಮೇಶ್,ಉಪಾಧ್ಯಕ್ಷರಾಗಿ ಮಂಗಳಮ್ಮ ಅವರುಗಳು ಚುನಾಯಿತರಾಗಿದ್ದಾರೆ.31 ಸದಸ್ಯರನ್ನು ಒಳಗೊಂಡಿರುವ ಮೈದಾಳ ಗ್ರಾ.ಪಂ ಪಂಚಾಯಿತಿಯಲ್ಲಿ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಬಿಜೆಪಿ ಬೆಂಬಲಿತ ಸದಸ್ಯ ಉಮೇಶ್ ಬಿ.ಜಿ 23 ಮತಗಳನ್ನು ಪಡೆದರೆ,ಇವರ ಎದುರಾಳಿ ಮೈದಾಳದ ನರಸಿಂಹಮೂರ್ತಿ 8 ಮತಗಳನ್ನು ಪಡೆದರು.
ಮಲ್ಲಸಂದ್ರ : ಮಲ್ಲಸಂದ್ರ ಗ್ರಾಮಪಂಚಾಯಿತಿಯ ಅಧ್ಯಕ್ಷ-ಉಪಾಧ್ಯಕ್ಷರ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಹಬ್ಬತ್ತನಹಳ್ಳಿ ಮಂಜುಮ್ಮ ಅಧ್ಯಕ್ಷರಾಗಿ,ಕೊತ್ತಿಹಳ್ಳಿ ಗಿರೀಶ್ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.ಅಧ್ಯಕ್ಷ ಸ್ಥಾನ ಎಸ್.ಸಿ. ಮಹಿಳೆಗೆ,ಉಪಾಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ ಮೀಸಲಾಗಿತ್ತು.ಅಧ್ಯಕ್ಷ ಸ್ಥಾನಕ್ಕೆ ಹಬ್ಬತ್ತನಹಳ್ಳಿ ಮಂಜುಮ್ಮ ವಿರುದ್ದ ಹಾಲುನೂರು ದುಶ್ಯಂತಮಣಿ ಸ್ಪರ್ಧಿಸಿದ್ದರೆ,ಉಪಾಧ್ಯಕ್ಷ ಸ್ಥಾನಕ್ಕೆ ಹಬ್ಬತ್ತನಹಳ್ಳಿಯ ಎಂ.ಆರ್.ಮಂಜುನಾಥ್ ಸ್ಪರ್ಧೆ ಮಾಡಿದ್ದರು.
ಮಲ್ಲಸಂದ್ರ ಗ್ರಾ.ಪಂನಲ್ಲಿ 22 ಸದಸ್ಯರಿದ್ದು,ಮಂಜಮ್ಮ ಪರ 13 ಮತಗಳು ಚಲಾವಣೆಯಾಗಿದ್ದು,ದುಶ್ಯಂತಮಣಿ ಪರ 08 ಮತಗಳು ಚಲಾವಣೆಯಾಗಿದ್ದು,ಒಂದು ಮತ ತಿರಸ್ಕೃತಗೊಂಡಿತ್ತು. ಉಪಾಧ್ಯಕ್ಷ ಸ್ಥಾನದಲ್ಲಿ ಗಿರೀಶ್ 13 ಮತ ಪಡೆದರೆ, ಎಂ.ಆರ್. ಮಂಜುನಾಥ್ 07 ಮತಗಳನ್ನು ಪಡೆದಿದ್ದರು.
ಇದುವರೆಗೂ ನಡೆದ 11 ಗ್ರಾ.ಪಂ. ಚುನಾವಣೆಯಲ್ಲಿ 10 ರಲ್ಲಿ ಬಿಜೆಪಿ ಬೆಂಬಲಿತ ಸದಸ್ಯರುಗಳು ಅಧ್ಯಕ್ಷ-ಉಪಾಧ್ಯಕ್ಷರಾಗಿ ಅಧಿಕಾರದ ಚುಕ್ಕಾಣಿ ಹಿಡಿದ್ದು,ಜೆಡಿಎಸ್ ಸಾಧನೆ ಶೂನ್ಯವಾಗಿದೆ.ಅಧ್ಯಕ್ಷ-ಉಪಾಧ್ಯಕ್ಷರಾಗಿ ಆಯ್ಕೆಯಾಗಿರುವ ಸದಸ್ಯರುಗಳಿಗೆ ಶಾಸಕ ಬಿ.ಸುರೇಶಗೌಡ ಶುಭ ಹಾರೈಸಿದ್ದಾರೆ.

Related Articles

Back to top button
Disclaimer: WebOnline.in is not responsible for any news or content. We are only developers for this client And any type of content posted here belong's to site's owner/editor, not WebOnline.in Company

Adblock Detected

Please consider supporting us by disabling your ad blocker