ಜಿಲ್ಲೆತುಮಕೂರುತುಮಕೂರು ಗ್ರಾಮಾಂತರಸುದ್ದಿ

ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ 34 ಸಾವಿರ ರೈತರಿಗೆ ಹಣ ವರ್ಗಾವಣೆ : ಶಾಸಕ ಬಿ.ಸುರೇಶಗೌಡ

ತುಮಕೂರು : ರೈತ ಈ ದೇಶದ ಬೆನ್ನೆಲುಬು ರೈತನ ಆರ್ಥಿಕ ಸದೃಢತೆಗಾಗಿ ಹಾಗೂ ಕೃಷಿ ಸಂಬಂಧಿತ ಚಟುವಟಿಕೆಗಳಿಗೆ ಅನುಕೂಲ ಆಗುವಂತೆ ನಮ್ಮ ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿಯವರು ಕೃಷಿ ಸಮ್ಮಾನ ನಿಧಿ ಯೋಜನೆಯಡಿ ಹಣ ವರ್ಗಾವಣೆ ಮಾಡಿದ್ದಾರೆ ಎಂದು ಶಾಸಕ ಬಿ. ಸುರೇಶ್ ಗೌಡ ತಿಳಿಸಿದರು.
 ಹೆಬ್ಬೂರು ಗ್ರಾಮದಲ್ಲಿ ಕೃಷಿ ಇಲಾಖೆ ವತಿಯಿಂದ ಗುರುವಾರ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಅಧ್ಯಕ್ಷತೆವಹಿಸಿ ಶಾಸಕ ಬಿ.ಸುರೇಶಗೌಡ ಮಾತನಾಡಿದರು.
ತುಮಕೂರು ತಾಲ್ಲೂಕು ವ್ಯಾಪ್ತಿಯಲ್ಲಿ ಪಿಎಂ ಕಿಸಾನ್ ಸಮಾನ್ ನಿಧಿ ಯೋಜನೆಗೆ 33440 ಜನ ರೈತರು ನೋಂದಣಿ ಮಾಡಿಕೊಂಡಿದ್ದಾರೆ. ಈ ಪೈಕಿ 26988 ರೈತರು ಇಕೆವೈಸಿ ಅಡಿ ನೊಂದಣಿ ಮಾಡಿಸಿಕೊಂಡಿದ್ದು ಇಷ್ಟು ರೈತರಿಗೆ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಅಡಿಯಲ್ಲಿ ಹಣ ವರ್ಗಾವಣೆ ಆಗಿದೆ ಎಂದು ಸುರೇಶ್ ಗೌಡ ತಿಳಿಸಿದರು.
ಉಳಿಕೆ ಇರುವಂತ 6452 ರೈತರು ಕೂಡಲೇ ಇ ಕೆ ವೈ ಸಿ ಅಡಿಯಲ್ಲಿ ನೋಂದಣಿ ಮಾಡಿಸಿಕೊಳ್ಳುವಂತೆ ಸುರೇಶಗೌಡ ತಿಳಿಸಿದರು.
 ಇಂದು 14ನೇ ಕೃಷಿ ಸಮ್ಮಾನ ನಿಧಿ ಹಣ ಬಿಡುಗಡೆಯಿಂದಾಗಿ ರೈತರ ಮೊಗದಲ್ಲಿ ಮಂದಹಾಸ ಮೂಡಿದ್ದು ಕೃಷಿ ಸಂಬಂಧಿತ ಚಟುವಟಿಕೆಗಳಿಗೆ ಈ ಹಣವನ್ನು ಬಳಕೆ ಮಾಡುವಂತೆ ಸುರೇಶಗೌಡ ತಿಳಿಸಿದರು.
ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿ ಯೋಜನೆಯಲ್ಲಿ ಕೃಷಿ ಕೂಡ ಒಂದಾಗಿದ್ದು ಕೃಷಿ ಅವಲಂಬಿತ ರೈತನ ಬದುಕು ಅಸನಾಗಬೇಕು ಎಂಬುದು ನಮ್ಮ ಕೇಂದ್ರ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಗಳಲ್ಲಿ ಇದು ಕೂಡ ಒಂದಾಗಿದೆ.
 ರೈತನ ಬದುಕು ಉತ್ತಮವನ್ನಾಗಿಸಲು ಮಾನ್ಯ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ರೈತ ಬಳಸುವಂತಹ ರಸಗೊಬ್ಬರಗಳ ಮೇಲೆ ರೈತನಿಗೆ ಹೊರೆಯಾಗದಿರಲಿ ಎಂದು ಗೊಬ್ಬರಕ್ಕಾಗಿ 2 ಲಕ್ಷ ಕೋಟಿ ಸಹಾಯಧನವನ್ನು ನಮ್ಮ ಕೇಂದ್ರದ ಬಿಜೆಪಿ ಸರ್ಕಾರ ನೀಡಿದೆ.
 ಈ ಪೈಕಿ ಒಂದುವರೆ ಲಕ್ಷ ಕೋಟಿ ಸಹಾಯಧನವನ್ನು ಯೂರಿಯಾಗೆ ಸಹಾಯಧನವನ್ನು ನೀಡಲಾಗಿದೆ ಎಂದು ತಿಳಿಸಿದರು.
ಇಂದು ದೇಶದಾದ್ಯಂತ ಒಂದು ಲಕ್ಷ ಇಪ್ಪತೈದು ಸಾವಿರ ಕಿಸಾನ್ ಸಮೃದ್ಧಿ ಕೇಂದ್ರಗಳನ್ನು ಇಂದು ಪ್ರಧಾನಿ ನರೇಂದ್ರ ಮೋದಿಯವರು ರಾಷ್ಟ್ರಕ್ಕೆ ಸಮರ್ಪಿಸಿದರು.
 ಈ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಲಕ್ಷ್ಮೀದೇವಮ್ಮ ಉಪಾಧ್ಯಕ್ಷರಾದ ಬಾಬು, ತಾಲ್ಲೂಕು ರೈತ ಸಂಘದ ಅಧ್ಯಕ್ಷರಾದ ಚಿಕ್ಕ ಬೋರೇಗೌಡ ತಾಲೂಕ್ ಪಂಚಾಯತಿ ಮಾಜಿ ಸದಸ್ಯರಾದ ಶಿವಕುಮಾರ್, ಬಿಜೆಪಿ ಅಧ್ಯಕ್ಷ ಶಂಕರಣ್ಣ, ಮುಖಂಡರಾದ ತಿಮ್ಮೇಗೌಡ. ವೈಟಿ ನಾಗರಾಜ್ ಹಾಗು ಮತ್ತಿತರರು ಇದ್ದರು
 ಹೆಬ್ಬೂರಿನ ಕೃಷಿ ಅಧಿಕಾರಿ ಸ್ವಾಗತಿಸಿ, ವಂದಿಸಿದರು.

Related Articles

Back to top button
Disclaimer: WebOnline.in is not responsible for any news or content. We are only developers for this client And any type of content posted here belong's to site's owner/editor, not WebOnline.in Company

Adblock Detected

Please consider supporting us by disabling your ad blocker