ಕ್ರೈಂ ನ್ಯೂಸ್ತುಮಕೂರುತುಮಕೂರು ನಗರ
ತುಮಕೂರಿನ ಎಸ್ಸಿ,ಎಸ್ಟಿ ಹಾಸ್ಟೆಲ್ ವಿದ್ಯಾರ್ಥಿ ಆತ್ಮಹತ್ಯೆ
ತುಮಕೂರು:ನಗರದ ಹನುಮಂತಪುರದಲ್ಲಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಹಾಸ್ಟೆಲ್ ನಲ್ಲಿ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಯನ್ನು ಅಂಜನ್ ಕುಮಾರ್ ಎಂದು ಹೇಳಲಾಗಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.
ಮಧುಗಿರಿ ತಾಲ್ಲೂಕು ಮುದ್ದೇನಹಳ್ಳಿ ಗ್ರಾಮದ ಅಂಜನ್ ಕುಮಾರ್ ದ್ವಿತೀಯ ಬಿ.ಎ. ಪದವಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಎಂದು ಹೇಳಲಾಗಿದೆ.
ಬಹುತೇಕ ವಿದ್ಯಾರ್ಥಿಗಳು ತಮ್ಮ ತಮ್ಮ ಊರುಗಳಿಗೆ ಸಂಕ್ರಾಂತಿ ಹಬ್ಬಕ್ಕೆ ತೆರಳಿದ್ದು, ರೂಮಿನಲ್ಲಿ ಅಂಜನ್ ಕುಮಾರ್ ಒಬ್ಬನೇ ಇದ್ದ ಎನ್ನಲಾಗಿದೆ. ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.
ಸ್ಥಳಕ್ಕೆ ನಗರ ಠಾಣೆ ಪೊಲೀಸರು ಆಗಮಿಸಿ ಪ್ರಕರಣ ದಾಖಲಿಸಿ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.