ಕೊರಟಗೆರೆ : ಗೃಹಸಚಿವರ ಕ್ಷೇತ್ರವಾದ ಕೊರಟಗೆರೆ ಪಟ್ಟಣ ಪಂಚಾಯಿತಿಯ ಎರಡನೇ ಅವಧಿಯ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಚುನಾವಣೆಯು ಚುನಾವಣಾಧಿಕಾರಿ ಮಂಜುನಾಥ್ ನೇತೃತ್ವದಲ್ಲಿ ಯಶಸ್ವಿಯಾಗಿ ನಡೆಯಿತು..
ಎರಡನೇ ಅವಧಿಯ ಅಧ್ಯಕ್ಷ ಸ್ಥಾನಕ್ಕೆ ಅನುಸೂಚಿತ ಮಹಿಳೆ ಮತ್ತು ಸಾಮಾನ್ಯ ವರ್ಗದ ಮಹಿಳೆಗೆ ಉಪಾಧ್ಯಕ್ಷ ಸ್ಥಾನ ನಿಗಧಿಯಾಗಿತ್ತು. ಅದರಂತೆ ಪಟ್ಟಣಕ್ಕೆ ೧೫ ವಾರ್ಡ್ಗಳಿದ್ದು ಇದರಲ್ಲಿ ಒಬ್ಬರು ಅನರ್ಹ ಸದಸ್ಯರಾದ ಹಿನ್ನೆಲೆ ೧೪ ಸದಸ್ಯರ ಸಮಬಲದಿಂದ ಅಧ್ಯಕ್ಷೆಯಾಗಿ ಅನಿತಾ ಉಪಾಧ್ಯಕ್ಷೆಯಾಗಿ ಉಸ್ಮಾಫಾರೀಯಾ ಆಯ್ಕೆಯಾಗಿದ್ದು ಈ ಮೂಲಕ ಕೊರಟಗೆರೆ ಕಾಂಗ್ರೆಸ್ ಭದ್ರಕೋಟೆಯೆಂದು ಸಾಬೀತು ಮಾಡಿದೆ.
ನೂತನ ಅಧ್ಯಕ್ಷೆ ಅನಿತಾ ಮಾತನಾಡಿ, ಪಟ್ಟಣದಲ್ಲಿ ಸ್ವಚ್ಛತೆಯನ್ನು ಕಾಪಾಡುವುದೇ ನನ್ನ ಮುಖ್ಯಗುರಿ. ಗೃಹ ಸಚಿವರ ಮಾರ್ಗದರ್ಶನದಲ್ಲಿ ಪಟ್ಟಣದ ಅಭಿವೃದ್ಧಿಗೆ ಶ್ರಮಿಸಲಾಗುವುದು. ಪ.ಪಂ ಎಲ್ಲಾ ಸದಸ್ಯರುಅಧ್ಯಕ್ಷ ಸ್ಥಾನಕ್ಕೆ ಅವಿರೋಧಆಯ್ಕೆ ಮಾಡಿ ಜವಬ್ದಾರಿಯುತ ಸ್ಥಾನವನ್ನು ನೀಡಿದ್ದು ಎಲ್ಲರ ವಿಶ್ವಾಸದೊಂದಿಗೆ ಪಟ್ಟಣದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುವುದಾಗಿ ತಿಳಿಸಿದರು.
ನೂತನಉಪಾಧ್ಯಕ್ಷೆ ಉಸ್ಮಾ ಫಾರೀಯ ಮಾತನಾಡಿ, ಪಟ್ಟಣದಲ್ಲಿ ಮೂಲಭೂತ ಸೌಕರ್ಯದಲ್ಲಿ ಕೊರತೆ ಕಂಡು ಬರದಂತೆ ಕರ್ತವ್ಯ ನಿರ್ವಹಿಸಿಕೊಂಡು ಹೋಗುತ್ತೇನೆ. ಗೃಹ ಸಚಿವರ ಆಶೀರ್ವಾದದಂತೆ ಇಂದು ಉಪಾಧ್ಯಕ್ಷೆಯಾಗಿ ಆಯ್ಕೆಯಾಗಿದ್ದೇನೆ. ಅಧ್ಯಕ್ಷರ ಜೊತೆಗೂಡಿ ಪಟ್ಟಣದ ಅಭಿವೃದ್ಧಿಗೆ ಶ್ತಮಿಸುತ್ತೇನೆ. ಆಯ್ಕೆ ಮಾಡಿದ ಸದಸ್ಯರಿಗೆ ಅಭಾರಿಯಾಗಿರುತ್ತೇನೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಚಂದ್ರಶೇಖರ್ಗೌಡ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಶ್ವತ್ಥ್ ನಾರಾಯಣ್, ಅರಕೆರೆ ಶಂಕರ್, ಮುಖಂಡರಾದ ಮಹಾಲಿಂಗಪ್ಪ , ನಗರಸಭಾ ಮಾಜಿ ಉಪಾಧ್ಯಕ್ಷ ವಾಲೇಚಂದ್ರು, ಪ.ಪಂ ಸದಸ್ಯರಾದ ಓಬಳರಾಜು, ಎ.ಡಿ ಬಲರಾಮಯ್ಯ, ಪ್ರದೀಪ್ಕುಮಾರ್, ನಟರಾಜ್, ನಂದೀಶ್, ಪುಟ್ಟನರಸಪ್ಪ, ಲಕ್ಷ್ಮೀನಾರಾಯಣ್, ನಾಗರಾಜು, ಕಾವ್ಯಶ್ರೀ ರಮೇಶ್, ಮಂಜುಳಾ, ಭಾರತಿ ಸಿದ್ದಮಲ್ಲಪ್ಪ, ಹೇಮಲತಾ, ಮುಖಂಡರಾದ ಕಲೀಂಉಲ್ಲಾ, ಸಾಯಿಸ್ಟೋರ್ ಮಂಜುನಾಥ್, ನರಸಿಂಹರಾಜು , ಕೆ.ಬಿ ಸುನೀಲ್ , ಎಸ್ಸಿ ಘಟಕದ ಪ್ರಧಾನಕಾರ್ಯದರ್ಶಿ ನಾಗರಾಜು, ಸೇರಿದಂತೆ ಇತರರು ಹಾಜರಿದ್ದರು.
ಜೆಡಿಎಸ್ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ:-
ಕೊರಟಗೆರೆ ಪಟ್ಟಣ ಪಂಚಾಯಿತಿಯ ಎರಡನೇ ಅವಧಿಯ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಚುನಾವಣೆ ಮುಗಿದ ಬಳಿಕ ಪಟ್ಟಣದ ಅಭಿವೃದ್ಧಿಗಾಗಿ ನೂತನ ಅಧ್ಯಕ್ಷೇ ಮತ್ತು ಉಪಾಧ್ಯಕ್ಷೆ, ಸದಸ್ಯ ಮಂಜುಳ ಸತ್ಯನಾರಾಯಣ್, ಪಕ್ಷೇತರವಾಗಿ ಆಯ್ಕೆಯಾಗಿದ್ದ ನಟರಾಜ್ ಸೇರಿ ಒಟ್ಟು ನಾಲ್ಕು ಮಂದಿ ಸದಸ್ಯರು ಪಟ್ಟಣದ ಪ್ರವಾಸಿ ಮಂದಿರದಲ್ಲಿ ಗೃಹ ಸಚಿವರ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡಿದ್ದು, ಸಚಿವರು ಅಭಿನಂದನೆ ಸಲ್ಲಿಸಿ ಶುಭಕೋರಿದ್ದಾರೆ. ಮುಖಂಡರು, ಕಾರ್ಯಕರ್ತರು ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಾಚರಣೆ ಮಾಡಿದರು.
ಕೊರಟಗೆರೆ ಪ.ಪಂಚಾಯಿತಿಗೆ ನೂತನ ಅಧ್ಯಕ್ಷೆಯಾಗಿ ಅನಿತಾ ಮತ್ತು ಉಪಾಧ್ಯೆಕ್ಷೆಯಾಗಿ ಉಸ್ಮಾಫಾರಿಯಾ ಆಯ್ಕೆಯಾಗಿ ಜೆಡಿಎಸ್ ತೊರೆದು ಕಾಂಗ್ರೆಸ್ ಪಕ್ಷ ಸೇರಿರುವುದು ಸಂತಸ ತಂದಿದೆ. ಪಟ್ಟಣದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಲಿ. ಅಧ್ಯಕ್ಷರು ಸೇರಿ ಒಟ್ಟು ನಾಲ್ಕು ಮಂದಿ ಸದಸ್ಯರು ಜೆಡಿಎಸ್ ತೊರೆದು ಕಾಂಗ್ರೆಸ್ ಪಕ್ಷ ಸೇರಿರುವುದು ಪಕ್ಷಕ್ಕೆ ಮತ್ತಷ್ಟು ಬಲ ಬಂದಿದೆ. ಮುಂದಿನ ದಿನಗಳಲ್ಲಿ ಪಟ್ಟಣ ಪಂಚಾಯಿತಿಯನ್ನು ಪುರಸಭೆಯನ್ನಾಗಿ ಮಾಡಲಾಗುವುದು.
ಡಾ.ಜಿ ಪರಮೇಶ್ವರ
ಗೃಹ ಸಚಿವ, ಕರ್ನಾಟಕ ಸರ್ಕಾರ.