ಸುದ್ದಿ

ಮೆರಗು ಮೂಡಿಸಿದ ತುಮಕೂರು ದಸರಾ ಮೆರವಣಿಗೆ ತಾಲೀಮು

ತುಮಕೂರು : ತುಮಕೂರು ದಸರಾ 2024ರ ಅಂಗವಾಗಿ ಅಕ್ಟೋಬರ್ 12 ವಿಜಯದಶಮಿ ದಿನದಂದು ನಡೆಯುವ ಜಂಬೂಸವಾರಿ ಕಾರ್ಯಕ್ರಮದ ಪೂರ್ವ ತಾಲೀಮು ವೈಭವಯುತವಾಗಿ ಜರಗಿತು.
ನಗರದ ಬಾಲಗಂಗಾಧರನಾಥ ಸ್ವಾಮೀಜಿ ವೃತ್ತದಲ್ಲಿ ನಂದಿ ಧ್ವಜಕ್ಕೆ ಪೂಜೆ ಸಲ್ಲಿಸುವ ಮೂಲಕ ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಿ. ಪರಮೇಶ್ವರ್ ಅವರು ದಸರಾ ಮೆರವಣಿಗೆ ತಾಲೀಮಿಗೆ ಚಾಲನೆ ನೀಡಿದರು.
ಮೆರವಣಿಗೆಯಲ್ಲಿ ಭವ್ಯ ಅಲಂಕೃತಗೊಂಡ ಕಾಡು ಸಿದ್ದೇಶ್ವರ ಮಠದ ಲಕ್ಷ್ಮಿ ಹಾಗೂ ಕರಿಬಸವೇಶ್ವರ ಮಠದ ಲಕ್ಷ್ಮಿ ಆನೆಗಳು ಗಜ ಗಾಂಭೀರ್ಯದೊಂದಿಗೆ ಹೆಜ್ಜೆ ಹಾಕಿದವು.
ಮೆರವಣಿಗೆಯ ಮುಂದಡಿಯಲ್ಲಿ ಚಿಟ್ ಮೇಳ, ಕರಡಿ ಮಂಜಲು, ಗಿಳಿ ಕುಣಿತ, ನಂದಿ ಧ್ವಜ ಕುಣಿತ, ನಾಸಿಕ್ ಡೋಲ್ ಸೇರಿದಂತೆ ವಿವಿಧ ಜಾನಪದ ಕಲಾ ಪ್ರಕಾರಗಳು ಭಾಗವಹಿಸಿ ಆಕರ್ಷಕ ಪ್ರದರ್ಶನ ನೀಡಿದವು. ಅಲ್ಲದೆ ಜಿಲ್ಲೆಯ ರಾಷ್ಟ್ರೀಯ ಚಾಂಪಿಯನ್ ಕ್ರೀಡಾಪಟುಗಳು ಮತ್ತು ಸಾಂಪ್ರದಾಯಿಕ ಉಡುಗೆ ತೊಟ್ಟ ಯುವಜನತೆ ಮೆರವಣಿಗೆಗೆ ರಂಗು ನೀಡಿದರು.

Related Articles

Back to top button
Disclaimer: WebOnline.in is not responsible for any news or content. We are only developers for this client And any type of content posted here belong's to site's owner/editor, not WebOnline.in Company

Adblock Detected

Please consider supporting us by disabling your ad blocker